ಶಿರಸಿ, ಜನವರಿ 7: ನಡೆದಾಡುವ ಯಕ್ಷಗಾನದ ಕೋಶ ಎಂದೇ ಕರೆಸಿಕೊಂಡಿದ್ದ ಹೊಸ್ತೋಟ ಮಂಜುನಾಥ ಭಾಗವತರು (80) ಮಂಗಳವಾರ ತಮ್ಮ ಜೀವನ ಎಂಬ ಕೊನೆಯ ಪ್ರಸಂಗವನ್ನು ಮುಗಿಸಿ ಸ್ವರ್ಗಸ್ಥರಾದರು. ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಜಾನಪದ ಅಕಾಡೆಮಿಯ ವಿಶೇಷ ಪುರಸ್ಕಾರ, ಆಳ್ವಾಸ್ ನುಡಿಸಿರಿ ಪುರಸ್ಕಾರ ಸೇರಿದಂತೆ ಹತ್ತು ಹಲವು ಪ್ರಶಸ್ತಿಗಳು ಅವರಿಗೆ ಸಂದಿವೆ.