ಕೇಂದ್ರ ಪುರಸ್ಕೃತ ಯೋಜನೆಗಳಾದ ಆಯುಷ್ಮಾನ ಭಾರತ ಆರೋಗ್ಯ ಕರ್ನಾಟಕ, ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ ಯೋಜನೆಯಲ್ಲಿ ರಾಜ್ಯದ ಧಾರವಾಡ ಜಿಲ್ಲೆ ರಾಜ್ಯದಲ್ಲಿ ಅಗ್ರಸ್ಥಾನದಲ್ಲಿದೆ. ಪ್ರಧಾನ ಮಂತ್ರಿ ಫಸಲ್ ವಿಮಾ ಯೋಜನೆಯಡಿ ಜಿಲ್ಲೆಗೆ 149 ಕೋಟಿ ರೂ.ದೊರೆತಿದೆ. ಜಿಲ್ಲಾಧಿಕಾರಿ ಮತ್ತು ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಮುತುವರ್ಜಿಯಿಂದ ಜಿಲ್ಲೆಯ ಪ್ರಗತಿ ಸಂತಸಕರ ರೀತಿಯಲ್ಲಿ ಸಾಗಿದೆ. ಹೀಗಂತ ಕೇಂದ್ರ ಸಂಸದೀಯ ವ್ಯವಹಾರಗಳು, ಗಣಿ ಮತ್ತು ಕಲ್ಲಿದ್ದಲು ಇಲಾಖೆ ಸಚಿವ ಪ್ರಲ್ಹಾದ ಜೋಶಿ ಹೇಳಿದ್ದಾರೆ.