ನವದೆಹಲಿ: ಅಮೆರಿಕ ಸೈನಿಕರು ಇರಾನ್​ನ ಸೇನಾ ಮುಖ್ಯಸ್ಥ ಜನರಲ್​ ಖಾಸಿಮ್​ ಸೊಲೈಮಾನಿ ಅವರನ್ನು ಹತ್ಯೆ ಮಾಡಿದ ಬಳಿಕ ಎರಡೂ ರಾಷ್ಟ್ರಗಳ ನಡುವೆ ಉಂಟಾಗಿರುವ ಉದ್ವಿಗ್ನ ಪರಿಸ್ಥಿತಿಯನ್ನು ಕಡಿಮೆ ಮಾಡಿ ಶಾಂತಿ ಸ್ಥಾಪನೆ ಮಾಡಲು ಭಾರತ ಯಾವುದೇ ಕ್ರಮ ತೆಗೆದುಕೊಂಡರೂ ಅದನ್ನು ನಾವು ಸ್ವಾಗತಿಸುತ್ತೇವೆ ಎಂದು ಭಾರತದಲ್ಲಿರುವ ಇರಾನ್ ರಾಯಭಾರಿ ಅಲಿ ಚೆಗೆನಿ ತಿಳಿಸಿದ್ದಾರೆ.