Job Description: ➤ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವರಾದ ಶಿವ್‌ರಾಜ್ ಸಿಂಗ್ ಚೌಹಾಣ್ ಅವರು ನವದೆಹಲಿಯ ICAR-IARI (ಭಾರತೀಯ ಕೃಷಿ ಸಂಶೋಧನಾ ಸಂಸ್ಥೆ) ಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೃಷಿ ವಿದ್ಯಾರ್ಥಿಗಳಿಗಾಗಿ ರಾಷ್ಟ್ರೀಯ ವಿದ್ಯಾರ್ಥಿವೇತನ ಪೋರ್ಟಲ್ (NSP) ಮತ್ತು ನೇರ ನಗದು ವರ್ಗಾವಣೆ (DBT) ವ್ಯವಸ್ಥೆಯಡಿ ವಿದ್ಯಾರ್ಥಿವೇತನ ಹಾಗೂ ಫೆಲೋಶಿಪ್ ಹಣವನ್ನು ನೇರವಾಗಿ ಬಿಡುಗಡೆ ಮಾಡಿದರು. ಈ ನೂತನ ವ್ಯವಸ್ಥೆಯಡಿ ಪ್ರಥಮ ಹಂತವಾಗಿ ದೇಶದ 6,000ಕ್ಕೂ ಹೆಚ್ಚು ಕೃಷಿ ಸಂಶೋಧಕರು ಮತ್ತು ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗಳಿಗೆ ₹21.35 ಕೋಟಿ ರೂಪಾಯಿಗಳನ್ನು ನೇರವಾಗಿ ಜಮಾ ಮಾಡಲಾಗಿದೆ.➤ ಈ ಯೋಜನೆಯ ಪ್ರಮುಖ ಅಂಶಗಳು ಹಾಗೂ ಉದ್ದೇಶಗಳು: ಮಾಸಿಕ ಆಧಾರದಲ್ಲಿ ವಿದ್ಯಾರ್ಥಿವೇತನ (Monthly Disbursement): ಸಾಂಪ್ರದಾಯಿಕ ವಿಧಾನದಲ್ಲಿ ವಿದ್ಯಾರ್ಥಿವೇತನ ತಲುಪಲು ಆಗುತ್ತಿದ್ದ ವಿಳಂಬವನ್ನು ತಪ್ಪಿಸಲು, ಇನ್ಮುಂದೆ ಪ್ರತಿ ತಿಂಗಳು ನೇರವಾಗಿ ವಿದ್ಯಾರ್ಥಿಗಳ ಖಾತೆಗೆ ವಿದ್ಯಾರ್ಥಿವೇತನ ಜಮೆಯಾಗಲಿದೆ. ಪಾರದರ್ಶಕತೆ ಮತ್ತು ವೇಗ: NSP ಮತ್ತು DBT ತಂತ್ರಜ್ಞಾನದ ಬಳಕೆಯಿಂದ ಮಧ್ಯವರ್ತಿಗಳ ಹಸ್ತಕ್ಷೇಪವಿಲ್ಲದೆ, ವ್ಯವಸ್ಥೆಯು ಹೆಚ್ಚು ಪಾರದರ್ಶಕ, ಸುಲಭ ಹಾಗೂ ಶೀಘ್ರವಾಗಲಿದೆ. ಪ್ರಾಯೋಗಿಕ ತರಬೇತಿಗೆ ಆದ್ಯತೆ: ಕೃಷಿ ಶಿಕ್ಷಣದಲ್ಲಿ ಸೈದ್ಧಾಂತಿಕ ಕಲಿವಿನ ಜೊತೆಗೆ ಪ್ರಾಯೋಗಿಕ ತರಬೇತಿ (Practical Training) ಮತ್ತು ಸಂಶೋಧನೆ ಅತ್ಯಗತ್ಯ. ಸಮಯಕ್ಕೆ ಸರಿಯಾಗಿ ಆರ್ಥಿಕ ನೆರವು ಸಿಗುವುದರಿಂದ ವಿದ್ಯಾರ್ಥಿಗಳು ತಮ್ಮ ಅಧ್ಯಯನ ಮತ್ತು ಸಂಶೋಧನೆಯತ್ತ ಹೆಚ್ಚಿನ ಗಮನ ಹರಿಸಬಹುದು ಎಂದು ಸಚಿವರು ತಿಳಿಸಿದರು.