Loading..!

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ 35 ಸಮಾಲೋಚಕ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
| Date:Sept. 29, 2019
not found
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯು ಸ್ವಚ್ಛ ಭಾರತ್ ಮಿಷನ್ (ಗ್ರಾಮೀಣ) ಯೋಜನೆಯಡಿ ಜಿಲ್ಲೆಗಳಲ್ಲಿ ಖಾಲಿ ಇರುವ 35 ಸಮಾಲೋಚಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಹುದ್ದೆಗಳ ಬಗೆಗಿನ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಬಹುದು. ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿದ್ದಲ್ಲಿ ಅಕ್ಟೋಬರ್ 14,2019ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಸಮಾಲೋಚಕ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಅಧಿಕೃತ ನಿಗದಿತ ನಮೂನೆಯ ಅರ್ಜಿಯನ್ನು ಡೌನ್‌ಲೋಡ್ ಮಾಡಿಕೊಂಡು, ಮಾಹಿತಿಯನ್ನು ಭರ್ತಿ ಮಾಡಿ, ವಯಸ್ಸಿನ ದೃಢೀಕರಣ, ವಿದ್ಯಾರ್ಹತೆ ಮತ್ತು ಅನುಭವಗಳ ದಾಖಲೆಗಳನ್ನು ಲಗತ್ತಿಸಿ ಅರ್ಜಿಯನ್ನು ರಿಜಿಸ್ಟರ್ಡ್ ಪೋಸ್ಟ್ / ಸ್ಪೀಡ್ ಪೋಸ್ಟ್ / ಕೊರಿಯರ್ ಮುಖಾಂತರ ಕಚೇರಿಗೆ ಅಕ್ಟೋಬರ್ 14, 2019ರೊಳಗೆ ತಲುಪುವಂತೆ ಕಳುಹಿಸಿ ಕೊಡಬೇಕು.
ಅರ್ಜಿ ಕಳುಹಿಸಿ ಕೊಡಬೇಕಾದ ಕಚೇರಿಯ ವಿಳಾಸ : ಆಯುಕ್ತರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, 2ನೇ ಮಹಡಿ, 'ಇ' ಬ್ಲಾಕ್, ಕೆ.ಹೆಚ್‌.ಬಿ ಕಾಂಪ್ಲೆಕ್ಸ್, ಕಾವೇರಿ ಭವನ, ಬೆಂಗಳೂರು-560009
No. of posts:  35
ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಉತ್ತಮ ತಯಾರಿಗಾಗಿ ಸಾಮಾನ್ಯ ಜ್ಞಾನ (General Knowledge) ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ

Comments