ಕರ್ನಾಟಕ ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆ ಮತ್ತೆ ಮುಂದೂಡಿಕೆ !
Published by: Basavaraj Halli | Date:26 ಮಾರ್ಚ್ 2020
ಕರ್ನಾಟಕ ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆ ಮತ್ತೆ ಮುಂದೂಡಿಕೆ !
ಭಾರತದಲ್ಲಿ ಕೊರೋನಾ ವೈರಾಣು ಸೋಂಕು ಹರಡುವಿಕೆಯನ್ನು ತಡೆಗಟ್ಟಲು ಮುಂಜಾಗ್ರತಾ ಕ್ರಮವಾಗಿ ಕೈಗೊಂಡಿರುವ ಲಾಕ್ ಡೌನ್ ವ್ಯವಸ್ಥೆಯಿಂದಾಗಿ 2020ರ ಏಪ್ರಿಲ್ 11 ರಂದು ನಿಗದಿಯಾಗಿದ್ದ ಶಿಕ್ಷಕರ ಅರ್ಹತಾ ಪರೀಕ್ಷೆ(ಟಿಇಟಿ)ಯನ್ನು ಮುಂದೂಡಲಾಗಿದ್ದು, ಪರೀಕ್ಷೆಯ ಮುಂದಿನ ದಿನಾಂಕವನ್ನು ನಂತರ ಘೋಷಿಸಲಾಗುವುದು ಎಂದೂ ಸಾರ್ವಜನಿಕ ಶಿಕ್ಷಣ ಇಲಾಖೆಯು ಪ್ರಕಟಣೆಯಲ್ಲಿ ತಿಳಿಸಿದೆ.

Comments