Loading..!

ಬಾಗಲಕೋಟೆ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ನಿಯಮಿತ ಬಾಗಲಕೋಟ ಇದರಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

|
ಬಾಗಲಕೋಟೆ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ನಿಯಮಿತ ಬಾಗಲಕೋಟ ಇದರಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಬಾಗಲಕೋಟೆ ಜಿಲ್ಲಾ ಸಹಕಾರ ಬ್ಯಾಂಕ್ ನಿಯಮಿತ ಖಾಲಿ ಇರುವ 44 ದ್ವಿತೀಯ ದರ್ಜೆ ಸಹಾಯಕರ ನೇಮಕಕ್ಕೆ ಸಂಬಂಧಿಸಿದಂತೆ ತಿದ್ದುಪಡಿ ಅಧಿಸೂಚನೆ ಪ್ರಕಟಿಸಿದ್ದು, ಮತ್ತೆ ಅರ್ಜಿ ಸಲ್ಲಿಸಲು ಅವಕಾಶ ನೀಡಿದೆ. 2018ರ ಡಿಸೆಂಬರ್ 11 ರಂದು 80 ವಿವಿಧ ಹುದ್ದೆಗಳ ನೇಮಕಕ್ಕೆ ಬ್ಯಾಂಕ್ ಅಧಿಸೂಚನೆ ಹೊರಡಿಸಿತ್ತು. ಇದರಲ್ಲಿ ದ್ವಿತೀಯ ದರ್ಜೆ ಸಹಾಯಕರ ಹುದ್ದೆಗಳಿಗೆ ಬಿಎಸ್ಸಿ,ಬಿಸಿಎ,ಬಿಕಾಂ,ಬಿಬಿಎ,ಬಿಬಿಎಂ ಅಥವಾ ಬಿಎಸ್ಸಿ(ಕೃಷಿ) ವಿದ್ಯಾರ್ಹತೆ ನಿಗದಿಪಡಿಸಿತ್ತು. ನಿಗದಿತ ವಿದ್ಯಾರ್ಹತೆಗೆ ಸಂಬಂಧಪಟ್ಟಂತೆ ಹೈಕೋರ್ಟ್ ನಲ್ಲಿ ರಿಟ್ ಅರ್ಜಿ ಸಲ್ಲಿಕೆಯಾಗಿರುವುದರಿಂದ ಇದೀಗ ಬಿಎ ಪದವಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳಿಗು ಅರ್ಜಿ ಸಲ್ಲಿಸಲು ಅವಕಾಶ ನೀಡಿ ತಿದ್ದುಪಡಿ ಅಧಿಸೂಚನೆ ಪ್ರಕಟಿಸಲಾಗಿದೆ. ಈಗ ಅರ್ಜಿ ಸಲ್ಲಿಸಲು ಜೂನ್ 24 ಕೊನೆಯ ದಿನವಾಗಿರುತ್ತದೆ. ಈ ಹಿಂದಿನ ಅಧಿಸೂಚನೆಗನುಗುಣವಾಗಿ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ಮತ್ತೆ ಅರ್ಜಿಸಲ್ಲಿಸುವ ಅಗತ್ಯವಿರುವುದಿಲ್ಲ. ಬಿಎ(BA) ಪದವಿ ಹೊರತುಪಡಿಸಿ ಇನ್ಯಾವುದೇ ಪದವಿಯನ್ನು ವಿದ್ಯಾರ್ಹತೆಯನ್ನಾಗಿ ಹೊಂದಿರುವ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಅವಕಾಶವಿರುವದಿಲ್ಲ ಎಂದು ಪ್ರಕಟಣೆಯಲ್ಲಿ ಬ್ಯಾಂಕ್ ಸ್ಪಷ್ಟಪಡಿಸಿದೆ. ಅರ್ಜಿ ಸಲ್ಲಿಸುವ ವಿಧಾನ: 1) ಬ್ಯಾಂಕಿನಿಂದ ಪೊರೈಸಿದ ಮೂಲ ಅರ್ಜಿಯಲ್ಲಿ ಭರ್ತಿ ಮಾಡಿ ಅಗತ್ಯ ಅರ್ಜಿ ಸಲ್ಲಿಸತಕ್ಕದ್ದು ಅಥವಾ ವೆಬ್‍ಸೈಟ ಮುಖಾಂತರ ಪಡೆದ ಅರ್ಜಿಗೆ ಡಿಡಿ ಲಗತ್ತಿಸಿ ಸಲ್ಲಿಸತಕ್ಕದ್ದು. 2) ಯಾವ ಹುದ್ದೆಗೆ ಅರ್ಜಿ ಸಲ್ಲಿಸಲಾಗುತ್ತದೆ ಎಂಬುವದನ್ನು ಲಕೋಟೆಯ ಮೇಲೆ ಸ್ಪಷ್ಟವಾಗಿ ನಮೂದಿಸಬೇಕು. 3) ಅರ್ಜಿಯನ್ನು ಸಲ್ಲಿಸಬೇಕಾದ ವಿಳಾಸ : ಸದಸ್ಯ ಕಾರ್ಯದರ್ಶಿ, ಸಿಬ್ಬಂದಿ ನೇಮಕಾತಿ ಸಮೀತಿ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಬಾಗಲಕೋಟ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ ನಿ., ಸೆಕ್ಟರ ನಂ: 24 ನವನಗರ ಬಾಗಕೋಟ-587103 4) ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ: 24-06-2019 ರ ಸಾಯಂಕಾಲ 5.00 ಘಂಟೆವರೆಗೆ ಮಾತ್ರ ಇರುತ್ತದೆ. * ಈ ಕುರಿತು ಏನಾದರು ಗೊಂದಲಗಳಿಂದಲ್ಲಿ ನೇರವಾಗಿ ಬ್ಯಾಂಕಿನೊಂದಿಗೆ ವ್ಯವಹರಿಸಿ.
Job Overview
No. of posts
44
Start Date
12 ಜೂನ್ 2019
End Date
24 ಜೂನ್ 2019
Employment Type
FULL_TIME
Organization
KPSC Vaani (Website)
Location
ಬಾಗಲಕೋಟೆ ಜಿಲ್ಲೆ, KA,
Selection Procedure:
ಆಯ್ಕೆ ವಿಧಾನ ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ
* ಅರ್ಹ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಕರೆಯಲಾಗುವದು ಅಂಥವರು ಲಿಖಿತ ಪರೀಕ್ಷಗೆ ತಮ್ಮ ಸ್ವಂತ ಖರ್ಚಿನಿಂದಲೇ ಹಾಜರಾಗತಕ್ಕದ್ದು. ಲಿಖಿತ ಪರೀಕ್ಷೆಯ ವೇಳೆ, ದಿನಾಂಕ, ಮತ್ತು ಸ್ಥಳದ ವಿವರವನ್ನು ಪ್ರತ್ಯೇಕವಾಗಿ ತಿಳಿಸಲಾಗುವದು.
*ನಂತರ 1:5 ಅನುಪಾತದಲ್ಲಿ ಅಭ್ಯರ್ಥಿಗಳ ಸಂದರ್ಶನ ನಡೆಸಲಾಗುವದು

iii) ದ್ವಿತೀಯ ದರ್ಜೆ ಸಹಾಯಕರ ಹುದ್ದೆಗೆ : 200 ಅಂಕಗಳ ಲಿಖಿತ ಪರೀಕ್ಷೆ ಇದ್ದು, ಕನ್ನಡ ಭಾಷೆಗಾಗಿ-50 ಅಂಕಗಳು, ಸಾಮಾನ್ಯ ಇಂಗ್ಲೀಷಗಾಗಿ-25 ಅಂಕಗಳು, ಸಾಮಾನ್ಯ ಜ್ಞಾನಕ್ಕಾಗಿ-25 ಅಂಕಗಳು, ಸಹಕಾರಿ ವಿಷಯಕ್ಕಾಗಿ-50 ಅಂಕಗಳು, ಭಾರತ ಸಂವಿಧಾನಕ್ಕೆ-25 ಅಂಕಗಳು, ಮತ್ತು ವಸ್ತುನಿಷ್ಠ ವಿಷಯಗಳಿಗೆ-25 ಅಂಕಗಳನ್ನು ಒಳಗೊಂಡಿರುತ್ತದೆ.
Qualification:
* ದ್ವಿತೀಯ ದರ್ಜೆ ಸಹಾಯಕರು -ಕರ್ನಾಟಕ ಸರ್ಕಾರದ ಅಧಿಕೃತ ವಿಶ್ವವಿದ್ಯಾಲಯದಿಂದ ಬಿಎ(BA) ದಲ್ಲಿ ಕನಿಷ್ಠ ಶೇಕಡಾ 60 ಅಂಕಗಳೊಂದಿಗೆ ಪದವಿ ಪಡೆದಿರಬೇಕು.
*ಕಂಪ್ಯೂಟರ್ ತರಬೇತಿ ಜ್ಞಾನ ಹೊಂದಿರಬೇಕು ಹಾಗೂ ಸಹಕಾರ ವಿಷಯದಲ್ಲೇ ಸ್ನಾತಕೋತ್ತರ ಪದವಿ ಅಥವಾ ಡಿಪ್ಲೊಮಾ ಪಡೆದವರಿಗೆ ಆದ್ಯತೆ ನೀಡಲಾಗುವುದು.
Fee:
ಸಾಮಾನ್ಯ ಅರ್ಹತೆ ಮತ್ತು ಪ್ರವರ್ಗ 2ಎ 2ಬಿ 3ಎ 3ಬಿಗೆ ಸೇರಿದ ಅಭ್ಯರ್ಥಿಗಳಿಗೆ 1000/- ರೂಪಾಯಿ
ಪ್ರವರ್ಗ-1, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಅಂಗವಿಕಲ ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳಿಗೆ 500/- ರೂಪಾಯಿ
Age Limit:
ಅರ್ಜಿಗಳನ್ನು ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಂದರೆ ದಿನಾಂಕ 05-01-2019 ರಂದು ಅಭ್ಯರ್ಥಿಯು ಕನಿಷ್ಠ 18 ವರ್ಷ ವಯೋಮಿತಿಯನ್ನು ಹೊಂದಿರತಕ್ಕದ್ದು ಮತ್ತು ಈ ಕೆಳಕಂಡ ಗರಿಷ್ಠ ವಯೋಮಿತಿ ಮೀರಿರಬಾರದು
ಸಾಮಾನ್ಯ ಅರ್ಹತೆ ಅಭ್ಯರ್ಥಿಗಳು 35 ವರ್ಷಗಳು
ಪ್ರವರ್ಗ 2ಎ, 2ಬಿ, 3ಎ, 3ಬಿ ಗೆ ಸೇರಿದ ಅಭ್ಯರ್ಥಿಗಳು 38 ವರ್ಷಗಳು
ಪ್ರವರ್ಗ-1, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು 40 ವರ್ಷಗಳು
to download official notification from news papers
ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಉತ್ತಮ ತಯಾರಿಗಾಗಿ ಸಾಮಾನ್ಯ ಜ್ಞಾನ (General Knowledge) ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ

Comments