Loading..!

ಕಿತ್ತೂರ ರಾಣಿ ಚೆನ್ನಮ್ಮ ಶಿಕ್ಷಣ ಸಂಸ್ಥೆ, ಬೆಳಗಾವಿಯಲ್ಲಿ ವಿವಿಧ ಅಸಿಸ್ಟೆಂಟ್ ಪ್ರೊಫೆಸರ್ ಹುದ್ದೆಗಳ ನೇಮಕಾತಿಗಾಗಿ ಅರ್ಹರಿಂದ ಅರ್ಜಿ ಆಹ್ವಾನ

|
ಕಿತ್ತೂರ ರಾಣಿ ಚೆನ್ನಮ್ಮ ಶಿಕ್ಷಣ ಸಂಸ್ಥೆ, ಬೆಳಗಾವಿಯಲ್ಲಿ ವಿವಿಧ ಅಸಿಸ್ಟೆಂಟ್ ಪ್ರೊಫೆಸರ್ ಹುದ್ದೆಗಳ ನೇಮಕಾತಿಗಾಗಿ ಅರ್ಹರಿಂದ ಅರ್ಜಿ ಆಹ್ವಾನ
ಬೆಳಗಾವಿಯ ಬೈಲಹೊಂಗಲದಲ್ಲಿರುವ ಕಿತ್ತೂರ ರಾಣಿ ಚೆನ್ನಮ್ಮ ಸಂಸ್ಥೆಯು ಸಹಾಯಕ ಪ್ರಾಧ್ಯಾಪಕರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತರು ಜುಲೈ 31ರೊಳಗೆ ಅರ್ಜಿ ಕಳುಹಿಸಬಹುದು. * ರಾಜ್ಯಶಾಸ್ತ್ರ(02 ಹುದ್ದೆ) * ಭೌತಶಾಸ್ತ್ರ (02), * ರಸಾಯನಶಾಸ್ತ್ರ(01), * ಸಸ್ಯಶಾಸ್ತ್ರ(01), * ಗಣಿತಶಾಸ್ತ್ರ(01), * ವಾಣಿಜ್ಯಶಾಸ್ತ್ರ(01) * ಗ್ರಂಥಪಾಲಕರು(01) ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲಾಗುತ್ತಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಜುಲೈ 31, 2019 ಸಹಾಯವಾಣಿ: 08288-237211 ಅರ್ಜಿ ಸಲ್ಲಿಸಲು ವಿಳಾಸ: ಅಧ್ಯಕ್ಷರು, ಕಿತ್ತೂರ ರಾಣಿ ಚೆನ್ನಮ್ಮ ಸಂಸ್ಥೆ, ಬೈಲಹೊಂಗಲ, ಬೆಳಗಾವಿ-591102
Job Overview
No. of posts
9
Start Date
12 ಜುಲೈ 2019
End Date
31 ಜುಲೈ 2019
Employment Type
FULL_TIME
Organization
KPSC Vaani (Website)
Location
ಬೈಲಹೊಂಗಲ, ಬೆಳಗಾವಿ, KA,
Qualification:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸ್ನಾತಕೋತ್ತರ ಪದವಿ ಪಡೆದಿರಬೇಕು. ಇದರೊಂದಿಗೆ ನೆಟ್‌/ಸ್ಲೆಟ್‌/ ಪಿಎಚ್‌.ಡಿ ಪದವಿ ಪಡೆದಿರಬೇಕು. ನಿಗದಿತ ವಿದ್ಯಾರ್ಹತೆಯಲ್ಲಿ ಕನಿಷ್ಠ ಶೇಕಡಾ 55 (ಎಸ್‌ಸಿ/ಎಸ್‌ಟಿ/ ಪ್ರವರ್ಗ01ರ ಅಭ್ಯರ್ಥಿಗಳು ಶೇಕಡಾ 50) ಅಂಕಗಳೊಂದಿಗೆ ತೇರ್ಗಡೆಯಾಗಿದ್ದರೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ
Fee:
ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 1500 ರೂ. ಹಾಗೂ ಪರಿಶಿಷ್ಟ ಜಾತಿ/ ಪಂಗಡ/ ಪ್ರವರ್ಗ-1ರ ಅಭ್ಯರ್ಥಿಗಳು 1000 ರೂ. ಶುಲ್ಕ ಪಾವತಿಸಬೇಕು. ಶುಲ್ಕವನ್ನು " ಚೇರ್‌ಮನ್‌/ ಕಾರ್ಯದರ್ಶಿಗಳು, ಕೆಆರ್‌ಸ ಶಿಕ್ಷಣ ಸಂಸ್ಥೆ, ಬೈಲಹೊಂಗಲ" ಹೆಸರಿನಲ್ಲಿ ಡಿಡಿ ಪಡೆದು ಪಾವತಿಸಲು ಸೂಚಿಸಲಾಗಿದೆ.
ಅರ್ಜಿಯ ಒಂದು ಪ್ರತಿಯನ್ನು ಈ ವಿಳಾಸಕ್ಕೆ ಕಳುಹಿಸಬೇಕು: ಜಂಟಿ ನಿರ್ದೇಶಕರು, ಕಾಲೇಜು ಶಿಕ್ಷಣ ಇಲಾಖೆ, ಮಿನಿ ವಿಧಾನಸೌಧ, ಧಾರವಾಡ.
Age Limit:
ಅಭ್ಯರ್ಥಿಗಳ ಗರಿಷ್ಠ ವಯಸ್ಸು 40 ವರ್ಷ. ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳಾಗಿದ್ದಲ್ಲಿ 43 ವರ್ಷ ಮತ್ತು ಪರಿಶಿಷ್ಟ ಜಾತಿ/ ಪಂಗಡ ಹಾಗೂ ಪ್ರವರ್ಗ-1ರ ಅಭ್ಯರ್ಥಿಗಳಾಗಿದ್ದಲ್ಲಿ 45 ವರ್ಷ.
ಕರ್ನಾಟಕ ಶಿಕ್ಷಕರ ನೇಮಕಾತಿ ಪರೀಕ್ಷೆಯಾ ಉತ್ತಮ ತಯಾರಿಗಾಗಿ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ

Comments