ಕೃಷಿ ಇಲಾಖೆಯ ಬೆಳೆ ವಿಮಾ ಯೋಜನೆಯಡಿ ಅನುಷ್ಟಾನಗೊಳಿಸಿರುವ ರಾಜ್ಯಮಟ್ಟದ ತಾಂತ್ರಿಕ ಉತ್ತೇಜನ ಘಟಕದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಕೃಷಿ ಇಲಾಖೆಯ ಬೆಳೆ ವಿಮಾ ಯೋಜನೆಯಡಿ ಅನುಷ್ಟಾನಗೊಳಿಸಿರುವ ರಾಜ್ಯಮಟ್ಟದ ತಾಂತ್ರಿಕ ಉತ್ತೇಜನ ಘಟಕದಲ್ಲಿ ಖಾಲಿ ಇರುವ ಈ ಕೆಳಗೆ ವಿವರಿಸಿದ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ :17-05-2021 ರೊಳಗಾಗಿ ಅರ್ಜಿಯನ್ನು ಸಲ್ಲಿಸಬೇಕು.
* ಹುದ್ದೆಗಳ ವಿವರ :
- ರಾಜತಾಂತ್ರಿಕ ಘಟಕದ ಮುಖ್ಯಸ್ಥರು
- ಕಾರ್ಯಕ್ರಮ ಸಂಯೋಜಕರು
- ಸಂವಹನ ಅಧಿಕಾರಿ
- ಸಾಮರ್ಥವೃದ್ದಿ ಅಧಿಕಾರಿ
- ಮಾಹಿತಿ ತಂತ್ರಜ್ಞಾನ ಮತ್ತು ನಿರ್ವಹಣಾ ವ್ಯವಸ್ಥೆ ತಜ್ಞರು
- ದತ್ತಾಂಶ ವಿಶ್ಲೇಷಕರು
- ಮೇಲ್ವಿಚಾರಣೆ ಮತ್ತು ಮೌಲ್ಯಮಾಪನ ತಜ್ಞರು
- ತೋಟಗಾರಿಕಾ ತಜ್ಞರು
- ಗುಮಾಸ್ತ
- ಡೇಟಾ ಎಂಟ್ರಿ ಆಪರೇಟರ್
ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ನೇರವಾಗಿ ಅಥವಾ ಅಂಚೆಯ ಮೂಲಕ ಅರ್ಜಿಯನ್ನೊಳಗೊಂಡ ಲಕೋಟೆಯ ಮೇಲೆ ಹುದ್ದೆಯ ಹೆಸರನ್ನು ನಮೂದಿಸಿ "ಕೃಷಿ ಆಯುಕ್ತರು, ಕೃಷಿ ಆಯುಕ್ತಾಲಯ, ಶೇಷಾದ್ರಿರಸ್ತೆ, ಬೆಂಗಳೂರು - 560001" ಕ್ಕೆ ಅಥವಾ ಭರ್ತಿಮಾಡಿದ ಅರ್ಜಿಯೊಂದಿಗೆ ಎಲ್ಲಾ ಮೂಲ ಪ್ರಮಾಣ ಪತ್ರಗಳು ಮತ್ತು ಅನುಭವ ಕುರಿತು ಸ್ಕ್ಯಾನ್ ಮಾಡಿ stsugari2020@gmail.com ವಿಳಾಸಕ್ಕೆ ಮೇ 17, 2021ರ ಸಂಜೆ 4 ಗಂಟೆಯೊಳಗೆ ಅರ್ಜಿಯನ್ನು ತಲುಪಿಸಬೇಕು.
Job Overview
- No. of posts
- 10
- Start Date
- 9 ಮೇ 2021
- End Date
- 17 ಮೇ 2021
- Employment Type
- FULL_TIME
- Organization
- KPSC Vaani (Website)
- Location
- KA,
Selection Procedure:
- ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
- ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಪತ್ರಿಕಾ ಪ್ರಕಟಣೆಯನ್ನು ಡೌನ್ಲೋಡ್ ಮಾಡಿಕೊಳ್ಳಿ.
Comments