Loading..!

ಕೃಷ್ಣದೇವರಾಯ ವಿಶ್ವವಿದ್ಯಾಲಯದಲ್ಲಿ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
| Date:15 ಜುಲೈ 2019
not found
ಬಳ್ಳಾರಿಯಲ್ಲಿರುವ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯವು ಬಳ್ಳಾರಿಯ ಜ್ಞಾನ ಸಾಗರ, ನಂದಿಹಳ್ಳಿ, ಕೊಪ್ಪಳ, ಯಲಬುರ್ಗಾ ಕ್ಯಾಂಪಸ್ ನ ವಿವಿಧ ಸ್ನಾತಕೋತ್ತರ ವಿಭಾಗಗಳಲ್ಲಿ ಗ್ರಂಥಾಲಯ ಮತ್ತು ಕ್ರೀಡಾ ವಿಭಾಗಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ತಾತ್ಕಾಲಿಕ ಅವಧಿಗೆ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಖಾಲಿ ಇರುವ ಹುದ್ದೆಗಳ ವಿವರಗಳು:
* ಅತಿಥಿ ಉಪನ್ಯಾಸಕರು
* ಅತಿಥಿ ಸಹಾಯಕ ಉಪನ್ಯಾಸಕರು
* ಗ್ರಂಥಪಾಲಕರು ಹಾಗೂ ಅತಿಥಿ ದೈಹಿಕ ಮತ್ತು ಸಾಂಸ್ಕೃತಿಕ ಶಿಕ್ಷಣ ಬೋಧಕ ಹುದ್ದೆಗಳು

ಈ ಹುದ್ದೆಗಳು ಕನ್ನಡ, ಇಂಗ್ಲಿಷ್, ರಾಜ್ಯಶಾಸ್ತ್ರ, ಇತಿಹಾಸ ಮತ್ತು ಪುರಾತತ್ವ, ಅರ್ಥಶಾಸ್ತ್ರ, ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ, ರಸಾಯನಶಾಸ್ತ್ರ/ಔದ್ಯೋಗಿಕ ರಸಾಯನ ಶಾಸ್ತ್ರ, ಭೌತಶಾಸ್ತ್ರ, ಪ್ರಾಣಿಶಾಸ್ತ್ರ, ಸಮಾಜ ಕಾರ್ಯ, ಖನಿಜ ಸಂಸ್ಕರಣ, ಗಣಕ ವಿಜ್ಞಾನ, ಕಾನೂನು, ಗ್ರಂಥಾಲಯ ಮತ್ತು ಮಾಹಿತಿ ತಂತ್ರಜ್ಞಾನ ವಿಭಾಗಗಳಲ್ಲಿ ಹುದ್ದೆಗಳು ಖಾಲಿ ಇರುತ್ತವೆ.

ಅರ್ಜಿ ಸಲ್ಲಿಸುವ ವಿಳಾಸ :
ಕುಲಸಚಿವರು,
ವಿಜಯನಗರ, ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯ
ಜ್ಞಾನ ಸಾಗರ ಆವರಣ, ವಿನಾಯಕ ನಗರ,
ಕಂಟೋನ್ಮೆಂಟ್, ಬಳ್ಳಾರಿ-583105

* ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಜುಲೈ 19 2019 ಆಗಿರುತ್ತದೆ
ಕರ್ನಾಟಕ ಶಿಕ್ಷಕರ ನೇಮಕಾತಿ ಪರೀಕ್ಷೆಯಾ ಉತ್ತಮ ತಯಾರಿಗಾಗಿ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ

Comments