Loading..!

ಕೃಷ್ಣದೇವರಾಯ ವಿಶ್ವವಿದ್ಯಾಲಯದಲ್ಲಿ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

|
ಕೃಷ್ಣದೇವರಾಯ ವಿಶ್ವವಿದ್ಯಾಲಯದಲ್ಲಿ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
ಬಳ್ಳಾರಿಯಲ್ಲಿರುವ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯವು ಬಳ್ಳಾರಿಯ ಜ್ಞಾನ ಸಾಗರ, ನಂದಿಹಳ್ಳಿ, ಕೊಪ್ಪಳ, ಯಲಬುರ್ಗಾ ಕ್ಯಾಂಪಸ್ ನ ವಿವಿಧ ಸ್ನಾತಕೋತ್ತರ ವಿಭಾಗಗಳಲ್ಲಿ ಗ್ರಂಥಾಲಯ ಮತ್ತು ಕ್ರೀಡಾ ವಿಭಾಗಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ತಾತ್ಕಾಲಿಕ ಅವಧಿಗೆ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಖಾಲಿ ಇರುವ ಹುದ್ದೆಗಳ ವಿವರಗಳು: * ಅತಿಥಿ ಉಪನ್ಯಾಸಕರು * ಅತಿಥಿ ಸಹಾಯಕ ಉಪನ್ಯಾಸಕರು * ಗ್ರಂಥಪಾಲಕರು ಹಾಗೂ ಅತಿಥಿ ದೈಹಿಕ ಮತ್ತು ಸಾಂಸ್ಕೃತಿಕ ಶಿಕ್ಷಣ ಬೋಧಕ ಹುದ್ದೆಗಳು ಈ ಹುದ್ದೆಗಳು ಕನ್ನಡ, ಇಂಗ್ಲಿಷ್, ರಾಜ್ಯಶಾಸ್ತ್ರ, ಇತಿಹಾಸ ಮತ್ತು ಪುರಾತತ್ವ, ಅರ್ಥಶಾಸ್ತ್ರ, ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ, ರಸಾಯನಶಾಸ್ತ್ರ/ಔದ್ಯೋಗಿಕ ರಸಾಯನ ಶಾಸ್ತ್ರ, ಭೌತಶಾಸ್ತ್ರ, ಪ್ರಾಣಿಶಾಸ್ತ್ರ, ಸಮಾಜ ಕಾರ್ಯ, ಖನಿಜ ಸಂಸ್ಕರಣ, ಗಣಕ ವಿಜ್ಞಾನ, ಕಾನೂನು, ಗ್ರಂಥಾಲಯ ಮತ್ತು ಮಾಹಿತಿ ತಂತ್ರಜ್ಞಾನ ವಿಭಾಗಗಳಲ್ಲಿ ಹುದ್ದೆಗಳು ಖಾಲಿ ಇರುತ್ತವೆ. ಅರ್ಜಿ ಸಲ್ಲಿಸುವ ವಿಳಾಸ : ಕುಲಸಚಿವರು, ವಿಜಯನಗರ, ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯ ಜ್ಞಾನ ಸಾಗರ ಆವರಣ, ವಿನಾಯಕ ನಗರ, ಕಂಟೋನ್ಮೆಂಟ್, ಬಳ್ಳಾರಿ-583105 * ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಜುಲೈ 19 2019 ಆಗಿರುತ್ತದೆ
Job Overview
Start Date
15 ಜುಲೈ 2019
End Date
19 ಜುಲೈ 2019
Employment Type
FULL_TIME
Organization
KPSC Vaani (Website)
Location
ಕೃಷ್ಣದೇವರಾಯ ವಿಶ್ವವಿದ್ಯಾಲಯ ಧಾರವಾಡ ಅದಿನ ಕಾಲೇಜುಗಳು, KA,
Selection Procedure:
ಈ ಹುದ್ದೆಗಳ ಆಯ್ಕೆಗೆ ಸಂದರ್ಶನ ನಡೆಯುವ ದಿನಾಂಕ ಜುಲೈ 25 ರಿಂದ 27 ರವರೆಗೆ
Qualification:
ಈ ಹುದ್ದೆಗಳಿಗೆ ಸ್ನಾತಕೋತ್ತರ ಪದವಿ, ನೆಟ್/ಕೆ-ಸೆಟ್ ಅಥವಾ ಕೋರ್ಸ್ ವರ್ಕ್ ನೊಂದಿಗೆ Phd ಮಾಡಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ
Fee:
ಅರ್ಜಿಯ ಜೊತೆಗೆ ಸಾಮಾನ್ಯ ಅಭ್ಯರ್ಥಿಗಳು (ಹಿಂದುಳಿದ ವರ್ಗದ ಅಭ್ಯರ್ಥಿಗಳು ಸೇರಿ) 500 ರೂಪಾಯಿ ಅರ್ಜಿ ಶುಲ್ಕ ಹಾಗೂ ಎಸ್ಸಿ ಎಸ್ಟಿ ಪ್ರವರ್ಗ-ಒಂದು ಅಭ್ಯರ್ಥಿಗಳು 250 ರೂಪಾಯಿ ಅರ್ಜಿ ಶುಲ್ಕವನ್ನು ಪಾವತಿಸಬೇಕು.
ಕರ್ನಾಟಕ ಶಿಕ್ಷಕರ ನೇಮಕಾತಿ ಪರೀಕ್ಷೆಯಾ ಉತ್ತಮ ತಯಾರಿಗಾಗಿ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ

Comments