Loading..!

ಮಹಾತ್ಮಾಗಾಂಧಿ ರಾಷ್ಟೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ
Published by: Surekha Halli | Date:18 ಆಗಸ್ಟ್ 2020
not found

ಮಹಾತ್ಮಾಗಾಂಧಿ ರಾಷ್ಟೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಅನುಷ್ಠಾನದ ಸಂಬಂಧದಲ್ಲಿ ಸ್ವೀಕೃತವಾಗುವ ದೂರುಗಳ ವಿಲೇವಾರಿ ಮತ್ತು ಕುಂದುಕೊರತೆ ನಿವಾರಣೆಗಾಗಿ ಈ ಕೆಳಕಂಡ ಜಿಲ್ಲೆಗಳಿಗೆ ಒಂಬುಡ್ಸ್ ಮನ್ ರವರನ್ನು ವಾಕ್-ಇನ್- ಸಂದರ್ಶನದ ಮೂಲಕ ಆಯ್ಕೆ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.


* ಹುದ್ದೆಗಳ ವಿವರ : ಒಂಬುಡ್ಸ್ ಮನ್ ಹುದ್ದೆ 


* ಈ ಹುದ್ದೆಗಳು ಬಳ್ಳಾರಿ, ಹಾವೇರಿ, ಕಲಬುರಗಿ ಮತ್ತು ಕೋಲಾರ  ಜಿಲ್ಲೆಗಳ ವ್ಯಾಪ್ತಿಯಲ್ಲಿ ಖಾಲಿ ಇರುತ್ತವೆ.

* ಈ ಕೆಳಕಂಡ ಯಾವುದಾದರೊಂದು ಕ್ಷೇತ್ರದಲ್ಲಿ ಕಡೆಯ ಪಕ್ಷ 10 ವರ್ಷಗಳ ಸೇವಾನುಭವ ಹೊಂದಿರಬೇಕಾಗುತ್ತದೆ.

- ಸಾರ್ವಜನಿಕ ಆಡಳಿತ

- ಕಾನೂನು 

- ಶೈಕ್ಷಣಿಕ ಕ್ಷೇತ್ರ

- ಸಮಾಜ ಸೇವೆ / ಮ್ಯಾನೇಜ್ ಮೆಂಟ್ 

 

* ಸಾರ್ವಜನಿಕರೊಂದಿಗೆ / ಸಮುದಾಯದ ಸಂಸ್ಥೆಗಳಲ್ಲಿ ಕೆಲಸ ನಿರ್ವಹಿಸಿದ ಅನುಭವವು ಕಡ್ಡಾಯ ಅರ್ಹತೆಯಾಗಿರುತ್ತದೆ.

* ಅರ್ಜಿ ಸಲ್ಲಿಸುವವರು ಯಾವುದೇ ರಾಜಕೀಯ ಪಕ್ಷದ ಮತ್ತು ನಿಷೇಧಿತ ಸಂಘ ಸಂಸ್ಥೆಯ ಸದಸ್ಯರಾಗಿರಬಾರದು.

* ಕಾಮಗಾರಿ ತಪಾಸಣೆ, ಕ್ಷೇತ್ರ ಭೇಟಿ / ವೀಕ್ಷಣೆ ಕೆಲಸಗಳಿಗೆ ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ಪ್ರವಾಸ ಕೈಗೊಳ್ಳಲು ಸಮರ್ಥರಿರಬೇಕು.   

* ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಗರಿಷ್ಟ 66 ವರ್ಷ ವಯಸ್ಸನ್ನು ಮೀರಿರಬಾರದು.

- ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ

Comments