Loading..!

ರಾಷ್ಟ್ರೀಯ ಆಹಾರ ಭದ್ರತಾ ಯೋಜನೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಕ್ಕೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Tags: Degree PG
Published by: Surekha Halli | Date:3 ಸೆಪ್ಟೆಂಬರ್ 2020
not found

ರಾಷ್ಟ್ರೀಯ ಆಹಾರ ಭದ್ರತಾ ಅಭಿಯಾನ ಯೋಜನೆಯಡಿಯಲ್ಲಿ(ಎನ್.ಎಫ್.ಎಸ್.ಎಮ್) ಖಾಲಿ ಇರುವ ಈ ಕೆಳಗೆ ತಿಳಿಸಿದ ಹುದ್ದೆಗಳ ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬೆಕು.  

* ಹುದ್ದೆಯ ವಿವರ 

- ಜಿಲ್ಲಾ ಸಲಹೆಗಾರರು -01

- ತಾಂತ್ರಿಕ ಸಹಾಯಕರು -02

 ಮೇಲ್ಕಂಡ ಹುದ್ದೆಗಳಿಗೆ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯನ್ನು "ಜಂಟಿ ಕೃಷಿ ನಿರ್ದೇಶಕರು, ತುಮಕೂರು" ಇವರ ಕಚೇರಿಯಿಂದ ದಿನಾಂಕ : 10-09-2020 ರೊಳಗೆ ಕಚೇರಿ ಸಮಯದಲ್ಲಿ ಪಡೆಯಬಹುದಾಗಿರುತ್ತದೆ. ನಂತರ ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ದಿನಾಂಕ : 14-09-2020 ರೊಳಗಾಗಿ ಜಂಟಿ ಕೃಷಿ ನಿರ್ದೇಶಕರು, ತುಮಕೂರು ರವರಿಗೆ ನೇರವಾಗಿ ಅಥವಾ ಅಂಚೆ ಮುಖಾಂತರ ಸಲ್ಲಿಸಬಹುದಾಗಿದೆ.  ಹೆಚ್ಚಿನ ಮಾಹಿತಿಗಾಗಿ ಕಚೇರಿಯ ತಾಂತ್ರಿಕ ಅಧಿಕಾರಿಗಳನ್ನು ಸಂಪರ್ಕಿಸಲು  ಪ್ರಕಟಣೆಯಲ್ಲಿ ತಿಳಿಸಲಾಗಿದೆ.
-ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು BSc (ಅಗ್ರಿ) / Msc  (ಅಗ್ರಿ) ಪದವಿಯ ವಿದ್ಯಾರ್ಹತೆಯನ್ನು ಹೊಂದಿರಬೇಕು.

* ಈ ನೇಮಕಾತಿ ಕುರಿತು ಹೆಚ್ಚಿನ ವಿವರಗಳಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಬಹುದಾಗಿದೆ.

No. of posts:  3

Comments

Purushottam Biradar ಸೆಪ್ಟೆ. 6, 2020, 11:15 ಅಪರಾಹ್ನ