Loading..!

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಕರ್ನಾಟಕ (RDPR Karnataka)ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
Published by: Bhagya R K | Date:5 ಫೆಬ್ರುವರಿ 2025
not found

ಕರ್ನಾಟಕ ಪಂಚಾಯತ್ ರಾಜ್ ಮತ್ತು ಗ್ರಾಮೀಣಾಭಿವೃದ್ಧಿ ಇಲಾಖೆ ಕರ್ನಾಟಕ ಪಂಚಾಯತ್ ರಾಜ್ ಆಯುಕ್ತಾಲಯದಲ್ಲಿ ಯೋಜನೆಗಳ ನಿರ್ವಹಣೆಗೆ ಹೊಸ ಸಮಾಲೋಚಕರ ಹುದ್ದೆಗೆ ಗುತ್ತಿಗೆ ಆಧಾರದ ಮೇಲೆ ಮುಂದಿನ ಒಂದು ವರ್ಷದ ಅವಧಿಗೆ ನೇಮಕಾತಿ ನಡೆಸುತ್ತಿದೆ. ಈ ಹುದ್ದೆಗೆ ಅರ್ಹ ಅಭ್ಯರ್ಥಿಗಳು ಫೆಬ್ರವರಿ 12, 2025, ಬೆಳಿಗ್ಗೆ 11:00 ಗಂಟೆಗೆ ನಡೆಯುವ ನೇರ ಸಂದರ್ಶನ (Walk-In Interview) ನಲ್ಲಿ ಭಾಗವಹಿಸಬಹುದು.  


ಹುದ್ದೆಯ ವಿವರ :
ಹುದ್ದೆಯ ಹೆಸರು : ಸಮಾಲೋಚಕರು
ಹುದ್ದೆಗಳ ಸಂಖ್ಯೆ : 01
ಸಂಬಳ ಮತ್ತು ಇತರೆ ವಿವರಗಳು : ಆಯೋಗದ ನಿಯಮಗಳ ಪ್ರಕಾರ ನಿರ್ಧರಿಸಲಾಗುವುದು.


ಸಂದರ್ಶನ ದಿನಾಂಕ ಮತ್ತು ಸ್ಥಳ :
ದಿನಾಂಕ : 12 ಫೆಬ್ರುವರಿ 2025
ಸಮಯ : ಬೆಳಿಗ್ಗೆ 11:00 ಗಂಟೆಗೆ
ಸ್ಥಳ : ಆಯೋಗದ ಕಚೇರಿ, ಕರ್ನಾಟಕ ರಾಜ್ಯ ಪಂಚಾಯತ್ ರಾಜ್ ಆಯೋಗ, ಕಾಳಿದಾಸ ಮಾರ್ಗ ಕೆ.ಜಿ. ರಸ್ತೆ, ಬೆಂಗಳೂರು - 560009.


- ಈ ಹುದ್ದೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಯೋಜನೆಗಳ ಸಮಾಲೋಚನೆಯ ಕಾರ್ಯವನ್ನು ನಿರ್ವಹಿಸಲು ಅನುಕೂಲವಾಗಲಿದೆ. ಉದ್ಯೋಗವನ್ನು ಬಯಸುವ ಅಭ್ಯರ್ಥಿಗಳು ತಮ್ಮ ವಿದ್ಯಾರ್ಹತೆ ಹಾಗೂ ಅನುಭವವನ್ನು ಸಲ್ಲಿಸಲು ಈ ಅವಕಾಶವನ್ನು ಸದ್ಬಳಕೆ ಮಾಡಿಕೊಳ್ಳಬಹುದು.


ಮುಂಬರುವ ಉದ್ಯೋಗಾಕಾಂಕ್ಷಿಗಳಿಗೆ ಇದು ಸುವರ್ಣಾವಕಾಶ. ಅರ್ಹ ಅಭ್ಯರ್ಥಿಗಳು ಈ ಅವಕಾಶವನ್ನು ಸದ್ಬಳಕೆ ಮಾಡಿಕೊಳ್ಳಬೇಕಾಗಿ ಕೋರಲಾಗಿದೆ.

Comments