Loading..!

ಭಾರತೀಯ ವಾಯುಸೇನೆಯು ನೇಮಕಾತಿ ರ್ಯಾಲಿ ಶಿವಮೊಗ್ಗದಲ್ಲಿ ಏರ್ಪಡಿಸಿದ್ದು ಈ ಕುರಿತ ಸಂಪೂರ್ಣ ಮಾಹಿತಿ ನಿಮಗಾಗಿ

|
ಭಾರತೀಯ ವಾಯುಸೇನೆಯು ನೇಮಕಾತಿ ರ್ಯಾಲಿ ಶಿವಮೊಗ್ಗದಲ್ಲಿ ಏರ್ಪಡಿಸಿದ್ದು ಈ ಕುರಿತ ಸಂಪೂರ್ಣ ಮಾಹಿತಿ ನಿಮಗಾಗಿ
ಭಾರತೀಯ ವಾಯುಸೇನೆಯು ಜುಲೈ 17 ರಿಂದ 22 ರವರೆಗೆ ಶಿವಮೊಗ್ಗದ ನೆಹರು ಕ್ರೀಡಾಂಗಣದಲ್ಲಿ ರಾಜ್ಯಮಟ್ಟದ ವಾಯುಸೇನೆ ನೇಮಕಾತಿ ರ್ಯಾಲಿಯನ್ನು ಏರ್ಪಡಿಸಿದ್ದು, ರಾಜ್ಯದ ಪುರುಷ ವಿದ್ಯಾರ್ಥಿಗಳು ಆಯಾ ಜಿಲ್ಲೆಗೆ ನಿಗದಿಪಡಿಸಿದ ದಿನಾಂಕದಂದು ನೇಮಕಾತಿ ರ್ಯಾಲಿಯಲ್ಲಿ ಭಾಗವಹಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ಅವರು ಕೆ.ಎ.ದಯಾನಂದ್ ಅವರು ತಿಳಿಸಿದ್ದಾರೆ. ಜಿಲ್ಲಾವಾರು ನೇಮಕಾತಿ ನಡೆಯುವ ದಿನಾಂಕಗಳು : * ಜುಲೈ 17 ಮತ್ತು 18 ರಂದು : ಬೆಳಗಾವಿ, ಬಾಗಲಕೋಟೆ, ವಿಜಯಪುರ, ಕಲಬುರಗಿ, ಯಾದಗಿರಿ, ರಾಯಚೂರು, ಧಾರವಾಡ, ಮತ್ತು ಉತ್ತರ ಕನ್ನಡ ಜಿಲ್ಲೆಗಳ ಅಭ್ಯರ್ಥಿಗಳು * ಜುಲೈ 21 ಮತ್ತು 22ರಂದು ಬೆಂಗಳೂರು ನಗರ, ಬೆಂಗಳೂರು ಗ್ರಾಮೀಣ, ರಾಮನಗರ,ಮಂಡ್ಯ, ಕೋಲಾರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಮೈಸೂರು, ಮಡಿಕೇರಿ, ದಕ್ಷಿಣ ಕನ್ನಡ( ಮಂಗಳೂರು), ಚಿಕ್ಕಮಗಳೂರು, ಚಿತ್ರದುರ್ಗ, ತುಮಕೂರು,ಹಾಸನ,ಗದಗ, ಕೊಪ್ಪಳ, ಹಾವೇರಿ, ಬಳ್ಳಾರಿ, ದಾವಣಗೆರೆ, ಶಿವಮೊಗ್ಗ ಮತ್ತು ತುಮಕೂರು * ಜುಲೈ 19 ಮತ್ತು 20 ರಂದು ರಾಜ್ಯದ ಎಲ್ಲಾ ಜಿಲ್ಲೆಗಳ ಅಭ್ಯರ್ಥಿಗಳ ನೇಮಕಾತಿ ರ್ಯಾಲಿಯಲ್ಲಿ ಭಾಗವಹಿಸಬಹುದಾಗಿದೆ * ಈ ಮೇಲೆ ತಿಳಿಸಿದಂತೆ ಆಯಾ ಜಿಲ್ಲೆಗಳ ಅಭ್ಯರ್ಥಿಗಳು ದೇಹದಾರ್ಢ್ಯ ಮತ್ತು ಲಿಖಿತ ಪರೀಕ್ಷೆಯಲ್ಲಿ ಭಾಗವಹಿಸಬಹುದಾಗಿದೆ.
Job Overview
Start Date
17 ಜುಲೈ 2019
End Date
22 ಜುಲೈ 2019
Employment Type
FULL_TIME
Organization
KPSC Vaani (Website)
Location
KA,
Qualification:
ನೇಮಕಾತಿ ರ್ಯಾಲಿಯಲ್ಲಿ ಭಾಗವಹಿಸಲು ಇಚ್ಛಿಸುವ ಅಭ್ಯರ್ಥಿ ದ್ವಿತೀಯ ಪಿಯುಸಿಯಲ್ಲಿ ಯಾವುದೇ ವಿಭಾಗದಲ್ಲಿ ಶೇಕಡ 50 ಅಂಕಗಳೊಂದಿಗೆ ಉತ್ತೀರ್ಣರಾಗಿದ್ದು, ಆಂಗ್ಲಭಾಷೆಯಲ್ಲಿ ಕನಿಷ್ಠ 50 ರಷ್ಟು ಅಂಕಗಳನ್ನು ಗಳಿಸಿರಬೇಕು. ನೇಮಕಾತಿಗೆ ನಿಗದಿಪಡಿಸಿದ ಎತ್ತರ ಹಾಗೂ ತೂಕ ಹೊಂದಿರಬೇಕು.
Age Limit:
1999 ರ ಜುಲೈನಿಂದ ಆರಂಭವಾಗಿ 2003 ರ ಜುಲೈ 1 ರೊಳಗಾಗಿ ಜನಿಸಿದ ಅಭ್ಯರ್ಥಿಗಳು ಆಗಿರಬೇಕು.
ಅಂದರೆ ಅಭ್ಯರ್ಥಿಗಳು ಕನಿಷ್ಠ 17 ವರ್ಷ ಮತ್ತು ಗರಿಷ್ಠ 20 ವರ್ಷ ವಯೋಮಿತಿಯೊಳಗಿನವರಾಗಿರಬೇಕು
ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಉತ್ತಮ ತಯಾರಿಗಾಗಿ ಸಾಮಾನ್ಯ ಜ್ಞಾನ (General Knowledge) ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ

Comments