ರೇಷ್ಮೆ ಬೆಳೆಗಾರರ ಹಾಗೂ ರೈತರ ಸೇವಾ ಸಂಘ ನಿಯಮಿತದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ
ರೇಷ್ಮೆ ಬೆಳೆಗಾರರ ಹಾಗೂ ರೈತರ ಸೇವಾ ಸಹಕಾರ ಸಂಘ ನಿಯಮಿತದಲ್ಲಿ ಖಾಲಿ ಇರುವ 5 ಕಿರಿಯ ಸಹಾಯಕ ಕಂ ಮಾರಾಟ ಗುಮಾಸ್ತ ಹುದ್ದೆಗಳಿಗೆ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಸಂಘವು ಪೂರೈಸುವ ಮೂಲ ಅರ್ಜಿಯೊಂದಿಗೆ ಪೂರಕ ದಾಖಲೆಗಳ ನಕಲುಗಳನ್ನು ಸ್ವಯಂ ದೃಡೀಕರಿಸಿ, ದಿನಾಂಕ 28-12-2023 ರೊಳಗಾಗಿ ಸಂಘದ ಕಚೇರಿಗೆ ತಲುಪಿಸತಕ್ಕದ್ದು.
* ಹುದ್ದೆಯ ವಿವರ :
- ಕಿರಿಯ ಸಹಾಯಕ ಕಂ ಮಾರಾಟ ಗುಮಾಸ್ತ - 05
ಅರ್ಜಿ ಸಲ್ಲಿಸುವ ವಿಧಾನ :
- ಸಂಘದಿಂದ ಪೂರೈಸಿದ ಮೂಲ ಅರ್ಜಿಯಲ್ಲಿ ಭರ್ತಿ ಮಾಡಿ ಅರ್ಜಿಯೊಂದಿಗೆ ಪೂರಕ ದಾಖಲೆಗಳ ನಕಲುಗಳನ್ನು ಸ್ವಯಂ ದೃಢೀಕರಿಸಿ "ಸದಸ್ಯ ಕಾರ್ಯದರ್ಶಿ, ಸಿಬ್ಬಂದಿ ನೇಮಕಾತಿ ಸಮಿತಿ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ, ರೇಷ್ಮೆ ಬೆಳೆಗಾರರ ಹಾಗೂ ರೈತರ ಸೇವಾ ಸಹಕಾರ ಸಂಘ ನಿ. ಸರ್ಜಾಪುರ - 562125, ಆನೇಕಲ್ ತಾಲ್ಲೂಕು, ಬೆಂಗಳೂರು ನಗರ ಜಿಲ್ಲೆ" ಇವರಿಗೆ ದಿನಾಂಕ : 28-12-2023 ರಂದು ಸಂಜೆ 5:00 ಗಂಟೆ ಒಳಗಾಗಿ ಖುದ್ದಾಗಿ ಅರ್ಜಿ ಸಲ್ಲಿಸತಕ್ಕದ್ದು.
- No. of posts
- 5
- Start Date
- 2 ಡಿಸೆಂಬರ್ 2023
- End Date
- 28 ಡಿಸೆಂಬರ್ 2023
- Employment Type
- FULL_TIME
- Organization
- KPSC Vaani (Website)
- Location
- ಬೆಂಗಳೂರು, KA,
Selection Procedure:
Qualification:
Fee:
Age Limit:
ವಯೋಮಿತಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗೆ ಕನಿಷ್ಠ 18 ವರ್ಷ ವಯಸ್ಸನ್ನು ಹೊಂದಿರಬೇಕು.
- ಸಾಮಾನ್ಯ ವರ್ಗದ ಅಭ್ಯರ್ಥಿಗಳು ಗರಿಷ್ಠ 35 ವರ್ಷ ವಯಸ್ಸನ್ನು ಮೀರಿರಬಾರದು.
- ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ ಗಳಿಗೆ ಸೇರಿದ ಅಭ್ಯರ್ಥಿಗಳು ಗರಿಷ್ಠ 38 ವರ್ಷ ವಯಸ್ಸನ್ನು ಮೀರಿರಬಾರದು.
- ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗ ಹಾಗೂ ಪ್ರವರ್ಗ 1ರ ಅಭ್ಯರ್ಥಿಗಳು ಗರಿಷ್ಠ 40 ವರ್ಷ ವಯಸ್ಸನ್ನು ಮೀರಿರಬಾರದು.
Comments