Loading..!

ಸಿಂಡಿಕೇಟ್ ರೈತರ ಸೇವಾ ಸಹಕಾರ ಸಂಘ (ರಿ) ನಿಯಮಿತದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

Tags: Degree PG
Published by: Rukmini Krushna Ganiger
|
ಸಿಂಡಿಕೇಟ್ ರೈತರ ಸೇವಾ ಸಹಕಾರ ಸಂಘ (ರಿ) ನಿಯಮಿತದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
- ಸಿಂಡಿಕೇಟ್ ರೈತರ ಸೇವಾ ಸಹಕಾರ ಸಂಘ (ರಿ) ನಿಯಮಿತ, ಅತ್ತಿಬೆಲೆ. ಆನೇಕಲ್ ತಾಲೂಕು, ಬೆಂಗಳೂರ ನಗರ ಜಿಲ್ಲೆದಲ್ಲಿ ಖಾಲಿ ಇರುವ 08 ಕಿರಿಯ ಸಹಾಯಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಸಂಘವು ಪೂರೈಸುವ ಮೂಲ ಅರ್ಜಿಯೊಂದಿಗೆ ಪೂರಕ ದಾಖಲೆಗಳ ನಕಲುಗಳನ್ನು ಸ್ವಯಂ ದೃಢೀಕರಿಸಿ ದಿನಾಂಕ : 01/10/2021 ರಂದು ಸಂಘದ ಮುಖ್ಯ ಕಚೇರಿಗೆ ತಲುಪಿಸುವಂತೆ ಸಲ್ಲಿಸತಕ್ಕದ್ದು.
Job Overview
No. of posts
8
Start Date
17 ಸೆಪ್ಟೆಂಬರ್ 2021
End Date
1 ಅಕ್ಟೋಬರ್ 2021
Employment Type
FULL_TIME
Organization
KPSC Vaani (Website)
Location
Bangalore Urban, KA,
Selection Procedure:
- ಅಭ್ಯರ್ಥಿಗಳ ನೇಮಕಾತಿ ಪ್ರಕ್ರಿಯೆಯು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಅನುಸಾರವಾಗಿರುತ್ತದೆ.
Qualification:
- ಅಭ್ಯರ್ಥಿಗಳು ಹುದ್ದೆಗಳಿಗೆ ಸಂಬಂಧಿಸಿದಂತೆ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ ಬೋರ್ಡ್ ದಿಂದ ಪದವಿ / ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮತ್ತು ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
Fee:
ಸಂಘದ ಕೇಂದ್ರ ಕಚೇರಿಯಲ್ಲಿ ಕೆಲಸದ ವೇಳೆಯಲ್ಲಿ ಅರ್ಜಿಯನ್ನು ವಿತರಿಸಲಾಗುವುದು. ₹ 1000 ಯನ್ನು ಸಿಂಡಿಕೇಟ್ ರೈತರ ಸೇವಾ ಸಹಕಾರ ಸಂಘ (ರಿ) ನಿಯಮಿತ, ಅತ್ತಿಬೆಲೆ. ಆನೇಕಲ್ ತಾಲೂಕು, ಬೆಂಗಳೂರ ನಗರ ಜಿಲ್ಲೆ ಇವರ ಹೆಸರಿನಲ್ಲಿ ನೀಡಿ ಅರ್ಜಿಯನ್ನು ಪಡೆಯಬಹುದು. ಈ ಹಣವನ್ನು ಯಾವುದೇ ಸಂದರ್ಭದಲ್ಲಿ ಹಿಂದಿರುಗಿಸಲಾಗುವುದಿಲ್ಲ. ಸಂಘದಿಂದ ಪೂರೈಸಿದ ಮೂಲ ಅರ್ಜಿಯಲ್ಲಿ ಭರ್ತಿ ಮಾಡಿ ಅರ್ಜಿಯೊಂದಿಗೆ ಪೂರಕ ದಾಖಲೆಗಳ ನಕಲು ಪ್ರತಿಗಳನ್ನು ಸ್ವಯಂ ದೃಢೀಕರಿಸಿ ಸದಸ್ಯ ಕಾರ್ಯದರ್ಶಿ, ಸಿಬ್ಬಂದಿ ನೇಮಕಾತಿ ಸಮಿತಿ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ. ಸಿಂಡಿಕೇಟ್ ರೈತರ ಸೇವಾ ಸಹಕಾರ ಸಂಘ ನಿಯಮಿತ, ಅತ್ತಿಬೆಲೆ- 562107,  ಆನೇಕಲ್ ತಾಲೂಕು, ಬೆಂಗಳೂರು ನಗರ ಜಿಲ್ಲೆ ಇವರಿಗೆ ದಿನಾಂಕ: 01/10/2021 ಸಂಜೆ : 5.00 ಘಂಟೆ ಒಳಗಾಗಿ ಸಂಘಕ್ಕೆ ಅಂಚೆ / ಕೋರಿಯರ್ / ಖುದ್ದಾಗಿ ತಲುಪುವಂತೆ ಸಲ್ಲಿಸತಕ್ಕದ್ದು
Age Limit:
- ಅರ್ಜಿ ಸಲ್ಲಿಸಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ನಿಯಮಗಳ ಪ್ರಕಾರ ವಯೋಮಿತಿಯನ್ನು ಹೊಂದಿರಬೇಕು.
ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
To Download the News Paper Notification
Related Tags: Degree PG

Comments