Loading..!

ಉತ್ತರ ಕನ್ನಡ ಜಿಲ್ಲಾ ಪಂಚಾಯತ್ ಕಾರ್ಯಾಲಯದಲ್ಲಿ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by: Surekha Halli | Date:26 ಮಾರ್ಚ್ 2021
not found

ಮಹಾತ್ಮಾಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಉತ್ತರಕನ್ನಡ ಜಿಲ್ಲಾ ವ್ಯಾಪ್ತಿಯಲ್ಲಿ ಖಾಲಿ ಇರುವ ಈ ಕೆಳಕಂಡ ವಿವಿಧ ಹುದ್ದೆಗಳನ್ನು ಹೊರಗುತ್ತಿಗೆ ಆಧಾರದ ನೇಮಕ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಬಹುದು.


* ಹುದ್ದೆಗಳ ವಿವರ : 
- BE- Civil  - 02 
- Bsc / Msc  - 01 (ತೋಟಗಾರಿಕೆ) ಮತ್ತು 
- Bsc / Msc -01 (ಅರಣ್ಯ ತಾಂತ್ರಿಕ ಸಹಾಯಕರು)


ಈ ಮೇಲೆ ತಿಳಿಸಿದ ಹುದ್ದೆಗಳ ಅವಶ್ಯಕತೆ ಇದ್ದು, ಹುದ್ದೆಗೆ ಆಸಕ್ತಿಯಿರುವ ಅಭ್ಯರ್ಥಿಗಳು ದಿನಾಂಕ : 25-03-2021  ರಿಂದ  29-03-2021 ರೊಳಗಾಗಿ ಅರ್ಜಿಗಳನ್ನು ಉತ್ತರ ಕನ್ನಡ ಜಿಲ್ಲಾ ಪಂಚಾಯತ್ ಕಾರ್ಯಾಲಯದಲ್ಲಿ ಸಲ್ಲಿಸಬಹುದಾಗಿರುತ್ತದೆ. ಅಪೂರ್ಣಗೊಂಡಿರುವ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.


ಅರ್ಹತೆಗಳು
1) BE-Civil ವಿದ್ಯಾರ್ಹತೆ
2) Bsc/Msc ತೋಟಗಾರಿಕೆ ವಿದ್ಯಾರ್ಹತೆ
3) Bsc/Msc ಅರಣ್ಯ ವಿದ್ಯಾರ್ಹತೆ 
4) ಅಭ್ಯರ್ಥಿಗಳು ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನ ಕನ್ನಡ ಮತ್ತು ಇಂಗ್ಲಿಷ್ ಭಾಷೆ ತಿಳಿದಿರಬೇಕು.

ಸದರಿ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳು ಮಾಸಿಕ ಸಂಭಾವನೆ  ರೂ 24,000/- ಮತ್ತು ಪ್ರಯಾಣ ಭತ್ಯೆ ಪಾವತಿಸಲಾಗುವುದು.


* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಪತ್ರಿಕಾ ಪ್ರಕಟಣೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಿ ಅಥವಾ ಉತ್ತರ ಕನ್ನಡ ಜಿಲ್ಲಾ ಪಂಚಾಯತ್ ಕಾರ್ಯಾಲಯಕ್ಕೆ ನೇರ ಭೇಟಿ ನೀಡಿ ಮಾಹಿತಿ ಪಡೆಯಬಹುದು.


No. of posts:  4

Comments