ಕರ್ನಾಟಕ ರಾಜ್ಯದ ವಿಜಯನಗರ ಜಿಲ್ಲೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by: Yallamma G | Date:7 ಮಾರ್ಚ್ 2024

ಕರ್ನಾಟಕ ರಾಜ್ಯದ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಅನುಷ್ಠಾನಕ್ಕಾಗಿ ವಿಜಯನಗರ ಜಿಲ್ಲೆಯಲ್ಲಿ ಖಾಲಿ ಇರುವ 13 ತಾಂತ್ರಿಕ ಸಹಾಯಕರು ಮತ್ತು ಗಣಕಯಂತ್ರ ನಿರ್ವಾಹಕರು ಸೇರಿದಂತೆ ವಿವಿಧ ಹುದ್ದೆಗಳನ್ನು ಹೊರಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ. ಆಸಕ್ತ ಅಭ್ಯರ್ಥಿಗಳು ದಿನಾಂಕ 11-03-2024 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿರುತ್ತದೆ.
ಹುದ್ದೆಗಳ ವಿವರ : 13
ತಾಂತ್ರಿಕ ಸಹಾಯಕರು (ತೋಟಗಾರಿಕೆ) : 03
ತಾಂತ್ರಿಕ ಸಹಾಯಕರು (ಅರಣ್ಯ) : 04
ತಾಂತ್ರಿಕ ಸಹಾಯಕರು (ಕೃಷಿ) : 02
ತಾಂತ್ರಿಕ ಸಹಾಯಕರು (ರೇಷ್ಮೆ) : 03
ಗಣಕಯಂತ್ರ ನಿರ್ವಾಹಕರು : 1
No. of posts: 13
Comments